![](https://hampimirror.com/media/2022/01/IMG-20220127-WA0171-1024x683.jpg)
ಬಳ್ಳಾರಿ.. ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬಳ್ಳಾರಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ನಿಂದ ಮೃತಪಟ್ಟ 15 ಜನ ಫಲಾನುಭವಿಗಳ ಕುಟುಂಬಸ್ಥರಿಗೆ ರಾಜ್ಯ ಸರಕಾರದಿಂದ 1ಲಕ್ಷ ರೂ.ಗಳ ಚೆಕ್ ಗಳನ್ನು ಗುರುವಾರ ವಿತರಿಸಿದರು.
![](https://hampimirror.com/media/2022/01/IMG-20220127-WA0211-1024x683.jpg)
ಕೋವಿಡ್ನಿಂದ ಮೃತಪಟ್ಟವರ ಕುಟುಂಬಸ್ಥರ ಅಹವಾಲುಗಳನ್ನು ಆಲಿಸಿದ ಸಚಿವ ಶ್ರೀರಾಮುಲು ಅವರು ಅವರಿಗೆ ಸಾಂತ್ವಾನ ಹೇಳಿದರು.
ಕೋವಿಡ್ ಇನ್ನೂ ನಮ್ಮಿಂದ ದೂರವಾಗಿಲ್ಲ. ನಾವೆಲ್ಲರೂ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸೋಣ ಎಂದರು.