ದಾವಣಗೆರೆ– ಕಳೆದ ಎರಡು ಮೂರು ವರ್ಷಗಳಿಂದ ಪಡಿತರ ಹಂಚಿಕೆಯಲ್ಲಿ ಆಗುತ್ತಿರುವ ವಂಚನೆಯ ವಿರುದ್ದ ಹೋರಾಟ ನಡೆಸಿ, ಕೊನೆಗೆ ನ್ಯಾಯ ಸಿಗದೆ ಇದ್ದ ಕಾರಣಕ್ಕೆ ಸಾಲುಮರದ ವೀರಾಚಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶೆರಣಾಗಿದ್ದಾರೆ.
![](https://hampimirror.com/media/2022/09/IMG-20220920-WA0226-747x1024.jpg)
ದಾವಣಗೇರಿ ಜಿಲ್ಲೆ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪರಸರ ಪ್ರೇಮಿ. ಮಿಟ್ಲಕಟ್ಟೆಯಲ್ಲಿ ಪಡಿತರ ವಿತರಣೆಯಲ್ಲಿ ಜನರಿಗೆ ವಂಚನೆ ಆಗುತ್ತಿದೆ ಎಂದು ಹೋರಾಟ ನಡೆಸಿದ್ದರು. ಅದಲ್ಲದೆ ನಿನ್ನೆಯಷ್ಟೆ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಯನ್ನ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದರು. ವೀರಾಚಾರಿಯವರು ಕಳೆದ ಎರಡ್ಮೂರು ವರ್ಷಗಳಿಂದ ನಿರಂತರ ಹೋರಾಟ ನಡೆಸಿದ್ದು ಎಲ್ಲರಿಗೂ ಗೊತ್ತಿದೆ.
![](https://hampimirror.com/media/2022/09/IMG-20220920-WA0227.jpg)
ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 3 ಸಾವಿರ ಮರಗಳನ್ನ ಬೆಳೆಸಿ ನಿತ್ಯ ಪರಿಸರ ಹಾಗೂ ಮರಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.ಈ ಕಾರಣಕ್ಕೆ ರಾಜ್ಯೋತ್ಸವ ಪ್ರಶಸ್ತಿ ಕೂಡ ವೀರಾಚಾರಿಯವರಿಗೆ ಲಭಿಸಿತ್ತು.
![](https://hampimirror.com/media/2022/09/image_editor_output_image2030766640-1663653496280.jpg)
ಇದೀಗ ಹೋರಾಟಕ್ಕೆ ನ್ಯಾಯ ಸಿಗದೆ ಇರುವ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.